Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:2 - ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತಾಡಿದ್ದಾನೋ; ನಮ್ಮ ಮೂಲಕವೂ ಆತನು ಮಾತಾಡಲಿಲ್ಲವೇ ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:2
22 ತಿಳಿವುಗಳ ಹೋಲಿಕೆ  

ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ಆಕೆ, ಇನ್ನೊಮ್ಮೆ ಗರ್ಭಿಣಿಯಾಗಿ ಗಂಡು ಮಗುವನ್ನೇ ಹೆತ್ತಳು. “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ, ಇದನ್ನು ತಿಳಿದೇ ಸರ್ವೇಶ್ವರ ನನಗೆ ಈ ಮಗನನ್ನು ದಯಪಾಲಿಸಿದರು,” ಎಂದು ಹೇಳಿ ಆ ಮಗನಿಗೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.


ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು.


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು