Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:8 - ಕನ್ನಡ ಸತ್ಯವೇದವು C.L. Bible (BSI)

8 ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:8
39 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಬಳಿಕ ನಾನು ಕೈ ತೆಗೆವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವೆ. ಆದರೆ ನನ್ನ ಮುಖ ನಿನಗೆ ಕಾಣಿಸದು,” ಎಂದು ಸರ್ವೇಶ್ವರ ಹೇಳಿದರು.


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ಮೋಶೆಯ ಮುಖ ಹೀಗೆ ಪ್ರಕಾಶವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.


ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು