Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:16 - ಕನ್ನಡ ಸತ್ಯವೇದವು C.L. Bible (BSI)

16 ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:16
14 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.


ಹೋಶೇಯನ ಗ್ರಂಥದಲ್ಲಿ ದೇವರೇ ಹೀಗೆ ಹೇಳಿದ್ದಾರೆ: “ನನ್ನ ಜನರಲ್ಲದವರನ್ನು ನನ್ನ ಜನರೆಂದು ಕರೆಯುವೆನು. ನನಗೆ ಪ್ರಿಯವಲ್ಲದ ನಾಡನ್ನು ನನ್ನ ಪ್ರಿಯತಮೆ ಎಂದು ಕರೆಯುವೆನು.”


ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,


ಗಾದ್ ಕುಲದ ಮಾಕಿಯನ ಮಗ ಗೆಯೂವೇಲ್


“ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು.


ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು