Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:20 - ಕನ್ನಡ ಸತ್ಯವೇದವು C.L. Bible (BSI)

20 ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:20
19 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!


ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.


ಅವರ ವಾಸಸ್ಥಳ ಒಳ್ಳೆಯದೋ ಕೆಟ್ಟದೋ, ಅವು ಪಾಳೆಯಗಳೋ ಕೋಟೆಗಳೋ


ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ,


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು