Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:21 - ಕನ್ನಡ ಸತ್ಯವೇದವು C.L. Bible (BSI)

21 ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:21
15 ತಿಳಿವುಗಳ ಹೋಲಿಕೆ  

ಎಚ್ಯೋನ್ ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದೇ ಕಾದೇಶ್.


ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.


ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.


ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ,


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.


ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು