Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:22 - ಕನ್ನಡ ಸತ್ಯವೇದವು C.L. Bible (BSI)

22 ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:22
21 ತಿಳಿವುಗಳ ಹೋಲಿಕೆ  

ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.


‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.


ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.


ಯಾಜಕ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್ ಎಂಬ ಆಶ್ರಯ ನಗರ.


ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.


ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.


ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.


ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.


ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.


ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು