Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:31 - ಕನ್ನಡ ಸತ್ಯವೇದವು C.L. Bible (BSI)

31 ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:31
8 ತಿಳಿವುಗಳ ಹೋಲಿಕೆ  

ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.


ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ‍ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.


“ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.


ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.


ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.


ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು