Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:21 - ಕನ್ನಡ ಸತ್ಯವೇದವು C.L. Bible (BSI)

21 ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:21
16 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು