Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:28 - ಕನ್ನಡ ಸತ್ಯವೇದವು C.L. Bible (BSI)

28 ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಹೇಳುವದೇನಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನೆಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:28
18 ತಿಳಿವುಗಳ ಹೋಲಿಕೆ  

ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಮೋಶೆ ಸರ್ವೇಶ್ವರನ ಮಾತುಗಳನ್ನೆಲ್ಲಾ ಇಸ್ರಯೇಲರಿಗೆ ತಿಳಿಸಿದನು. ಅವರು ಬಹಳವಾಗಿ ವ್ಯಸನಪಟ್ಟರು.


“ಸರ್ವೇಶ್ವರ ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡರು. ಅವರು ನಿಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಒಳ್ಳೇ ನಾಡನ್ನು ಈ ದುಷ್ಟಜನರಲ್ಲಿ ಯಾರೂ ನೋಡುವುದಿಲ್ಲವೆಂದು ಪ್ರಮಾಣಮಾಡಿದರು.


ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಈ ಕಾರಣ ಆಣೆಯಿಟ್ಟನು ಕೈಯೆತ್ತಿ : I “ಬೀಳಮಾಡುವೆನು ನಿಮ್ಮನು ಅಡವಿಯಲಿ, II


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು