Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:3 - ಕನ್ನಡ ಸತ್ಯವೇದವು C.L. Bible (BSI)

3 ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವದಕ್ಕೆ ಈ ದೇಶಕ್ಕೆ ಬರಮಾಡುತ್ತಾನೆ; ನಮ್ಮ ಹೆಂಡರೂ ಮಕ್ಕಳೂ ಪರರ ಪಾಲಾಗುವರಲ್ಲಾ; ನಾವು ಐಗುಪ್ತದೇಶಕ್ಕೆ ತಿರಿಗಿ ಹೋಗುವದು ಒಳ್ಳೇದಲ್ಲವೇ ಎಂದು ಹೇಳಿಕೊಳ್ಳುತ್ತಾ ಒಬ್ಬರ ಸಂಗಡಲೊಬ್ಬರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:3
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ನಿರಾಕರಿಸಿದರು. ಅವನನ್ನು ತಿರಸ್ಕರಿಸಿ ಈಜಿಪ್ಟ್ ದೇಶಕ್ಕೆ ಹಿಂದಿರುಗಲು ಮನಸ್ಸು ಮಾಡಿದರು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


“ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಬಂಧುಬಳಗದವರು ಸತ್ತಂತೆ ನಾವೂ ಸತ್ತುಹೋಗಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು! ನೀವು ಸರ್ವೇಶ್ವರನ ಪ್ರಜೆಯಾದ


ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು