Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:33 - ಕನ್ನಡ ಸತ್ಯವೇದವು C.L. Bible (BSI)

33 ನಿಮ್ಮ ಮಕ್ಕಳು ನೀವು ಮಾಡಿದ ದ್ರೋಹದ ಫಲವನ್ನು ಅನುಭವಿಸುವವರಾಗಿ ನಾಲ್ವತ್ತು ವರ್ಷ ಮರುಭೂಮಿಯಲ್ಲೇ ಅಲೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಾಲ್ವತ್ತು ವರುಷ ಅರಣ್ಯವಾಸಿಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:33
20 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II


ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.


ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು