Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:37 - ಕನ್ನಡ ಸತ್ಯವೇದವು C.L. Bible (BSI)

37 ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವ ದೇವರ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:37
17 ತಿಳಿವುಗಳ ಹೋಲಿಕೆ  

ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”


ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.


ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.


ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


“ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಬಂಧುಬಳಗದವರು ಸತ್ತಂತೆ ನಾವೂ ಸತ್ತುಹೋಗಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು! ನೀವು ಸರ್ವೇಶ್ವರನ ಪ್ರಜೆಯಾದ


ಈ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಪಕ್ಕಕ್ಕೆ ತಿರುಗಿಕೊಂಡಿತು. ಹಾಗೇ ತಿರುಗಿಕೊಳ್ಳದೆ ಹೋಗಿದ್ದರೆ ನಿನ್ನನ್ನು ಕೊಂದು ಕತ್ತೆಯನ್ನು ಉಳಿಸುತ್ತಿದ್ದೆ,” ಎಂದು ಹೇಳಿದನು.


ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು