Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:5
18 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದ್ದೇ ಮೋಶೆ ನೆಲದ ಮೇಲೆ ಬೋರಲಾಗಿ ಬಿದ್ದನು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


ಸರ್ವೇಶ್ವರ ಯೆಹೋಶುವನಿಗೆ ಹೀಗೆ ಎಂದರು : “ನೀನು ಅಧೋಮುಖವಾಗಿ ಬಿದ್ದು ಇರುವುದೇಕೆ, ಏಳು.


ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,


ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು