ಅರಣ್ಯಕಾಂಡ 14:9 - ಕನ್ನಡ ಸತ್ಯವೇದವು C.L. Bible (BSI)9 ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು. ಅಧ್ಯಾಯವನ್ನು ನೋಡಿ |