Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:29 - ಕನ್ನಡ ಸತ್ಯವೇದವು C.L. Bible (BSI)

29 ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:29
12 ತಿಳಿವುಗಳ ಹೋಲಿಕೆ  

ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.


ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.


ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.


“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ಸ್ವದೇಶಿಗೂ ನಿಮ್ಮೊಡನೆ ವಾಸವಾಗಿರುವ ವಿದೇಶಿಗೂ ಅನ್ವಯಿಸುವ ವಿಧಿ ಒಂದೇ ಆಗಿರುತ್ತದೆ,”


ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.


“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು