Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:11 - ಕನ್ನಡ ಸತ್ಯವೇದವು C.L. Bible (BSI)

11 ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಮತ್ತು ನಿನ್ನ ಹಿಂಬಾಲಕರು ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:11
15 ತಿಳಿವುಗಳ ಹೋಲಿಕೆ  

ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.


ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಮೋಶೆ ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬಿರಾಮರನ್ನು ಬರುವಂತೆ ಹೇಳಿಕಳಿಸಿದನು.


ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕ ವರ್ಗಗಳು ಇವೇ.


ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು