Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:14 - ಕನ್ನಡ ಸತ್ಯವೇದವು C.L. Bible (BSI)

14 ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:14
12 ತಿಳಿವುಗಳ ಹೋಲಿಕೆ  

ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು.


“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.


“ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು