Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:15 - ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:15
18 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.


ಮೋಶೆ ಕೋರಹನಿಗೆ, “ನೀನೂ ನಿನ್ನ ಪಂಗಡದವರು ಮತ್ತು ಆರೋನನು ನಾಳೆ ಸರ್ವೇಶ್ವರನ ಸನ್ನಿಧಿಗೆ ಬರಬೇಕು.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು