Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:19 - ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:19
12 ತಿಳಿವುಗಳ ಹೋಲಿಕೆ  

ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.


ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.


ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.


ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.


ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.


ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.


ಮೋಶೆ - ಆರೋನರಿಗೆ ಸರ್ವೇಶ್ವರ,


ಜನರಿಗೆ ನೀರು ಇಲ್ಲದೆಹೋಯಿತು. ಅವರು ಮೋಶೆ ಮತ್ತು ಆರೋನರ ವಿರುದ್ಧ ಸಭೆಸೇರಿ ಮೋಶೆಯ ಸಂಗಡ ವಾದಿಸತೊಡಗಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು