Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:21 - ಕನ್ನಡ ಸತ್ಯವೇದವು C.L. Bible (BSI)

21 “ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:21
19 ತಿಳಿವುಗಳ ಹೋಲಿಕೆ  

ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಹೀಗಿರಲಾಗಿ ನೀವು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿಮಗೆ ವಿರುದ್ಧ ಮಾತಾಡಿಕೊಳ್ಳುವರು:


ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಮೋಶೆ - ಆರೋನರಿಗೆ ಸರ್ವೇಶ್ವರ,


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು