Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:22 - ಕನ್ನಡ ಸತ್ಯವೇದವು C.L. Bible (BSI)

22 ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:22
24 ತಿಳಿವುಗಳ ಹೋಲಿಕೆ  

“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.


ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.


ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಈ ಮಾತುಗಳನ್ನು ಕೇಳಿದ್ದೇ ಮೋಶೆ ನೆಲದ ಮೇಲೆ ಬೋರಲಾಗಿ ಬಿದ್ದನು.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.


“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು