Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:35 - ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:35
14 ತಿಳಿವುಗಳ ಹೋಲಿಕೆ  

ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II


ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.


ಇವರ ಸಮೇತ ಸಮುದಾಯದವರಲ್ಲಿ ಮುಖ್ಯಸ್ಥರೂ ಸಲಹೆಗಾರರೂ ಹೆಸರಾಂತ ವ್ಯಕ್ತಿಗಳೂ ಆಗಿದ್ದ 250 ಮಂದಿ ಇಸ್ರಯೇಲರು ಕೂಡ ದಂಗೆಯೆದ್ದರು.


ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.


ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.


ಸರ್ವೇಶ್ವರ ಸ್ವಾಮಿ ಮೋಶೆಗೆ,


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.


ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು