Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:38 - ಕನ್ನಡ ಸತ್ಯವೇದವು C.L. Bible (BSI)

38 ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:38
14 ತಿಳಿವುಗಳ ಹೋಲಿಕೆ  

ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ.


ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


“ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.


ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು