Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:3 - ಕನ್ನಡ ಸತ್ಯವೇದವು C.L. Bible (BSI)

3 ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಲೇವಿ ಕುಲಕ್ಕೂ ಒಂದು ಕೋಲು ಇರುವದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:3
10 ತಿಳಿವುಗಳ ಹೋಲಿಕೆ  

ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನು ಮತ್ತು ಮೋಶೆಯನ್ನು ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದ್ದನು.


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಇವರು - ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. ಲೇವಿ ನೂರಮೂವತ್ತೇಳು ವರ್ಷ ಬದುಕಿದ್ದನು.


“ಇಸ್ರಯೇಲರ ಸಂಗಡ ನೀನು ಮಾತಾಡಿ ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೋ. ಅವನವನ ಕೋಲಿನ ಮೇಲೆ ಆಯಾ ಅಧಿಪತಿಯ ಹೆಸರನ್ನು ಬರೆಯಿಸು.


ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು