Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:11 - ಕನ್ನಡ ಸತ್ಯವೇದವು C.L. Bible (BSI)

11 “ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:11
10 ತಿಳಿವುಗಳ ಹೋಲಿಕೆ  

“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.


ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ಅವುಗಳಲ್ಲಿ ಅತಿ ಪವಿತ್ರವಾದುವುಗಳನ್ನು ನೀವೇ ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಅತಿ ಪವಿತ್ರವಾದುವು; ಎಂಬುದನ್ನು ತಿಳಿದಿರಬೇಕು.


“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು