Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:2
16 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.


ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ.


ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಸರ್ವೇಶ್ವರ ಮೋಶೆಗೆ ಇತ್ತ ಆಜ್ಞೆ ಇದು:


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು