Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:23 - ಕನ್ನಡ ಸತ್ಯವೇದವು C.L. Bible (BSI)

23 ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:23
10 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.


ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


“ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.


ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.


ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು