Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:32 - ಕನ್ನಡ ಸತ್ಯವೇದವು C.L. Bible (BSI)

32 ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ವಿುಕ್ಕದರ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವದಿಲ್ಲ. ಇಸ್ರಾಯೇಲ್ಯರು ಸಮರ್ಪಿಸುವ ದೇವರ ವಸ್ತುಗಳನ್ನು ಸಾಧಾರಣವೆಂದೆಣಿಸಿ ಸಾಯಬೇಡಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:32
10 ತಿಳಿವುಗಳ ಹೋಲಿಕೆ  

ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


“ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನಿಗೆ ಹೀಗೆಂದರು:


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು