Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:6 - ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ ನಾನು ಇಸ್ರಾಯೇಲ್ಯರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ತೆಗೆದುಕೊಂಡಿದ್ದೇನೆ; ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ; ಅವರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:6
14 ತಿಳಿವುಗಳ ಹೋಲಿಕೆ  

ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.


“ನೀನು ಇಸ್ರಯೇಲರ ಜೇಷ್ಠರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತು. ನಾನು ಸರ್ವೇಶ್ವರ!


“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


“ಕೇಳಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.


ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು