Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:12 - ಕನ್ನಡ ಸತ್ಯವೇದವು C.L. Bible (BSI)

12 ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:12
12 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಆದರೆ ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.


ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು