Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:19 - ಕನ್ನಡ ಸತ್ಯವೇದವು C.L. Bible (BSI)

19 ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:19
18 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.


ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಬಳಿಕ ನೀವು ಪಾಳೆಯದೊಳಗೆ ಬರಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು