Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:2 - ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನಾದ ನಾನು ಒಂದು ವಿಧಿಯನ್ನು ನೇವಿುಸಿದ್ದೇನೆ; ಅದೇನಂದರೆ - ಎಂದೂ ನೊಗವನ್ನು ಹೊರದ ಮತ್ತು ಯಾವ ಕುಂದು ಕೊರತೆಯೂ ಇಲ್ಲದ ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:2
21 ತಿಳಿವುಗಳ ಹೋಲಿಕೆ  

ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -


ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.


ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನಿಗೆ ಹೀಗೆಂದರು:


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು