Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:3 - ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡುಹೋಗಿ ತನಗೆ ಎದುರಾಗಿಯೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:3
11 ತಿಳಿವುಗಳ ಹೋಲಿಕೆ  

ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.


“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.


ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.


ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆ ಹೋರಿಯಲ್ಲಿ ಮಿಕ್ಕದ್ದನ್ನೆಲ್ಲಾ, ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು