Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:4 - ಕನ್ನಡ ಸತ್ಯವೇದವು C.L. Bible (BSI)

4 ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:4
13 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.


“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಈಜಿಪ್ಟ್ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವೆಲ್ಲಾ ನೆನಪಿಗೆ ಬರುತ್ತವೆ.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಅವರು ಈಜಿಪ್ಟರ ನಾಡನ್ನು ಬಿಟ್ಟ ನಂತರ ಮರುಭೂಮಿಯಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು