Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:34 - ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:34
24 ತಿಳಿವುಗಳ ಹೋಲಿಕೆ  

ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ


ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.


‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು