Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:4
14 ತಿಳಿವುಗಳ ಹೋಲಿಕೆ  

ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.


ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಚೆಲ್ಮೋನದಲ್ಲಿ ಇಳಿದುಕೊಂಡರು.


ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ‍ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.


ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಮರುಭೂಮಿಗೆ ಹೊರಟುಹೋಗಿ’ ಎಂದು ಆಜ್ಞಾಪಿಸಿದರು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಮಾಡಿದನು. ಸರ್ವಸಮೂಹದವರು ನೋಡುತ್ತಿರುವಾಗ ಅವರು ಹೋರ್ ಬೆಟ್ಟವನ್ನು ಹತ್ತಿದರು.


(ಅಮಾಲೇಕ್ಯರು ಹಾಗು ಕಾನಾನ್ಯರು ಅದರ ಕಣಿವೆಯಲ್ಲಿ ವಾಸಮಾಡುತ್ತಿದ್ದಾರೆ) ಈ ಕಾರಣ ನೀವು ನಾಳೆ ಹಿಂದಿರುಗಿ ಕೆಂಪುಸಮುದ್ರಕ್ಕೆ ಹೋಗುವ ದಾರಿ ಹಿಡಿದು ಮರುಭೂಮಿಗೆ ಪ್ರಯಾಣ ಮಾಡಬೇಕು,” ಎಂದು ಹೇಳಿದರು.


“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.


ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು