ಅರಣ್ಯಕಾಂಡ 21:6 - ಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ