Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಇಸ್ರಾಯೇಲ್ಯರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:1
14 ತಿಳಿವುಗಳ ಹೋಲಿಕೆ  

ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಜೋರ್ಡನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು.


ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.


ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.


ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.


ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು