Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಕಡೆ ಹೋಯಿತು; ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:23
11 ತಿಳಿವುಗಳ ಹೋಲಿಕೆ  

ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.


ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ.


ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.


ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.


ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು