Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:34 - ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:34
16 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


ಈ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಪಕ್ಕಕ್ಕೆ ತಿರುಗಿಕೊಂಡಿತು. ಹಾಗೇ ತಿರುಗಿಕೊಳ್ಳದೆ ಹೋಗಿದ್ದರೆ ನಿನ್ನನ್ನು ಕೊಂದು ಕತ್ತೆಯನ್ನು ಉಳಿಸುತ್ತಿದ್ದೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು