Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:4 - ಕನ್ನಡ ಸತ್ಯವೇದವು C.L. Bible (BSI)

4 ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:4
13 ತಿಳಿವುಗಳ ಹೋಲಿಕೆ  

ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ?


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು.


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು