Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:1
19 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


‘ಏಳನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಏಳು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು.


ಬಾಲಾಕನು ಅಂತೆಯೇ ಮಾಡಿ ಪ್ರತಿಯೊಂದು ಪೀಠದಲ್ಲೂ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು