Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಬಾಲಾಕನು, “ದಯಮಾಡಿ ನನ್ನೊಡನೆ ಇನ್ನೊಂದು ಸ್ಥಳಕ್ಕೆ ಬನ್ನಿ. ಅಲ್ಲಿಂದಲೂ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸರು. ಅವರ ಒಂದು ಕೊನೆ ತುಣುಕು ಮಾತ್ರ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:13
10 ತಿಳಿವುಗಳ ಹೋಲಿಕೆ  

ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.


ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.


ಅದಕ್ಕೆ ಬಿಳಾಮನು, “ಸರ್ವೇಶ್ವರ ನುಡಿಸುವುದನ್ನೇ ನಾನು ನುಡಿಯಬೇಕಾಗಿದೆಯಲ್ಲವೆ?” ಎಂದುಬಿಟ್ಟನು.


ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು