Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:22 - ಕನ್ನಡ ಸತ್ಯವೇದವು C.L. Bible (BSI)

22 ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:22
14 ತಿಳಿವುಗಳ ಹೋಲಿಕೆ  

ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು