Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:3 - ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:3
16 ತಿಳಿವುಗಳ ಹೋಲಿಕೆ  

ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.


ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.


ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.


ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು.


ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.


ಅದಕ್ಕೆ ಬಿಳಾಮನು, “ಸರ್ವೇಶ್ವರ ನುಡಿಸುವುದನ್ನೇ ನಾನು ನುಡಿಯಬೇಕಾಗಿದೆಯಲ್ಲವೆ?” ಎಂದುಬಿಟ್ಟನು.


ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು.


ಆದರೆ ನಾನು ಆ ಬಿಳಾಮನಿಗೆ ಸಮ್ಮತಿ ಕೊಡಲಿಲ್ಲವಾದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು