Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:4 - ಕನ್ನಡ ಸತ್ಯವೇದವು C.L. Bible (BSI)

4 ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ - ನಾನು ಆ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:4
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.


ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.


ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.


ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು.


ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.


ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು