Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿಹೋಗಿ ಹೀಗೆ ಹೀಗೆ ಹೇಳಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:5
14 ತಿಳಿವುಗಳ ಹೋಲಿಕೆ  

ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.


ಬಿಳಾಮನು ಬಾಲಾಕನ ಬಳಿಗೆ ಬಂದಾಗ ತಾನು ದಹನಬಲಿಯನ್ನು ಸಮರ್ಪಿಸಿದ್ದ ಪೀಠದ ಹತ್ತಿರವೆ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರೆಲ್ಲರು ಅವನ ಬಳಿಯಲ್ಲೆ ಇದ್ದರು. ಆಗ ಬಿಳಾಮನು ಪದ್ಯರೂಪದಲ್ಲಿ ಹೀಗೆಂದು ನುಡಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು