Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:8 - ಕನ್ನಡ ಸತ್ಯವೇದವು C.L. Bible (BSI)

8 ದೇವರೇ ಶಪಿಸಿಲ್ಲದವರನ್ನು ನಾನೇನೆಂತು ಶಪಿಸಲಿ? ಸರ್ವೇಶ್ವರನೇ ಧಿಕ್ಕರಿಸಿಲ್ಲದವರನ್ನು ನಾನೇನೆಂತು ಧಿಕ್ಕರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಏನೆಂದು ಶಪಿಸಲಿ; ದೇವರು ಶಪಿಸಲಿಲ್ಲವಲ್ಲಾ. ಏನೆಂದು ಆಕ್ರೋಶಿಸಲಿ; ಯೆಹೋವನು ಆಕ್ರೋಶಿಸಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ದೇವರು ಅವರನ್ನು ಆಶೀರ್ವದಿಸಿರುವಾಗ ನಾನು ಅವರನ್ನು ಶಪಿಸಲು ಆಗುವುದಿಲ್ಲ. ಯೆಹೋವನು ಅವರ ಮೇಲೆ ನಾಶನವನ್ನು ಬರಮಾಡಲಿಲ್ಲ. ಆದ್ದರಿಂದ ನಾಶನವು ಅವರ ಮೇಲೆ ಇಳಿದುಬರುವಂತೆ ಮಾಡಲು ನನಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:8
8 ತಿಳಿವುಗಳ ಹೋಲಿಕೆ  

ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು