Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:9 - ಕನ್ನಡ ಸತ್ಯವೇದವು C.L. Bible (BSI)

9 ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಟ್ಟದ ಶಿಖರದಿಂದ ನಾನು ಅವರನ್ನು ಕಂಡೆನು; ಗುಡ್ಡದಿಂದ ಅವರನ್ನು ನೋಡಿದೆನು. ಆ ಜನಾಂಗವು ತಾನು ಇತರ ಜನಾಂಗಗಳಂತಲ್ಲವೆಂದು ಭಾವಿಸಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:9
15 ತಿಳಿವುಗಳ ಹೋಲಿಕೆ  

ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು