Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:10 - ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:10
15 ತಿಳಿವುಗಳ ಹೋಲಿಕೆ  

ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.


ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು.


“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.


ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”


ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”


ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.


ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು.


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.


ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.


ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು